ರಾಣಿ ಚೆನ್ನಮ್ಮ ವಿವಿ ಸಿಂಡಿಕೇಟ್ ಸದಸ್ಯರಾಗಿ ಡಾ. ಎನ್.ಬಿ. ಹೊಸಮನಿ ನಾಮನಿರ್ದೇಶನ ನೇಮಕ

ಜನರ ಧ್ವನಿ ನ್ಯೂಸ್ ಗೆ ಸ್ವಾಗತ ನಮಸ್ಕಾರಗಳು

ಮುದ್ದೇಬಿಹಾಳ: ಸಮೀಪದ ಬಸವನಬಾಗೇವಾಡಿ ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ದಕ್ಷ ಪ್ರಾಂಶುಪಾಲರಾದ ಡಾ. ಎನ್.ಬಿ. ಹೊಸಮನಿ ಅವರಿಗೆ ಬೆಳಗಾವಿಯ ಪ್ರತಿಷ್ಠಿತ ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯದ ಸಿಂಡಿಕೇಟ್ ಪ್ರಾಧಿಕಾರದ ಸದಸ್ಯರಾಗಿ ಕಾರ್ಯನಿರ್ವಹಿಸುವ ಮಹತ್ತರ ಜವಾಬ್ದಾರಿ ಲಭಿಸಿದೆ.

ಈ ಕುರಿತು ವಿಶ್ವವಿದ್ಯಾಲಯದ ಕುಲಸಚಿವರಾದ ಶ್ರೀ ಸಂತೋಷ ಕಾಮಗೌಡ ಅವರು ಅಧಿಕೃತವಾಗಿ ಆದೇಶ ಹೊರಡಿಸಿದ್ದು, ಡಾ. ಹೊಸಮನಿ ಅವರ ಶೈಕ್ಷಣಿಕ ಸೇವೆಯನ್ನು ಪರಿಗಣಿಸಿ ಈ ಗೌರವ ನೀಡಲಾಗಿದೆ.

ಕುಂಟೋಜಿ ಗ್ರಾಮದ ಹೆಮ್ಮೆ: 

ಮುದ್ದೇಬಿಹಾಳ ತಾಲ್ಲೂಕಿನ ಕುಂಟೋಜಿ ಗ್ರಾಮದವರಾದ ಇವರು, ಅಪ್ಪಟ ಗ್ರಾಮೀಣ ಪ್ರತಿಭೆಯಾಗಿದ್ದು, ವಿದ್ಯಾಕ್ಷೇತ್ರದಲ್ಲಿ ಹಂತ-ಹಂತವಾಗಿ ಬೆಳೆದು ಬಂದವರು. ಸದ್ಯ ಇವರು ವಿದ್ಯಾಭಿಷೇಕ ಪರಿಷತ್ ಸದಸ್ಯರಾಗಿ ಹಾಗೂ ಕರ್ನಾಟಕ ಸರ್ಕಾರಿ ಪ್ರಾಧ್ಯಾಪಕರ ಸಂಘದ ವಲಯ ಅಧ್ಯಕ್ಷರಾಗಿ ಅಚ್ಚುಕಟ್ಟಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.

ಇವರ ಈ ನೂತನ ನೇಮಕಕ್ಕೆ ತಾಲ್ಲೂಕಿನ ಜನತೆ, ಶೈಕ್ಷಣಿಕ ವಲಯದ ಗಣ್ಯರು ಹಾಗೂ ಕುಂಟೋಜಿ ಗ್ರಾಮದ ಸಾರ್ವಜನಿಕರು ಹರ್ಷ ವ್ಯಕ್ತಪಡಿಸಿ, ಡಾ. ಹೊಸಮನಿ ಅವರಿಗೆ ಅಭಿನಂದನೆಗಳ ಮಹಾಪೂರವನ್ನೇ ಹರಿಸಿದ್ದಾರೆ. ಇವರ ಮಾರ್ಗದರ್ಶನದಲ್ಲಿ ವಿಶ್ವವಿದ್ಯಾಲಯವು ಶೈಕ್ಷಣಿಕವಾಗಿ ಮತ್ತಷ್ಟು ಉನ್ನತಿಗೆ ಏರಲಿ ಎಂದು ಆಶಿಸಲಾಗಿದೆ.

विज्ञापन बॉक्स (विज्ञापन देने के लिए संपर्क करें)

ಇದನ್ನೂ ಓದಿ ----

ತಪ್ಪದೇ ಮತ ಚಲಾಯಿಸಿ

क्या आपको लगता है कि बॉलीवुड ड्रग्स केस में और भी कई बड़े सितारों के नाम सामने आएंगे?

View Results

Loading ... Loading ...

आज का राशिफल देखें